ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…