ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…