ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…