ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…