ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…