ರಕ್ಷಾ ಬಂಧನ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಬ್ಬವನ್ನು ವೋಟ್ ಬ್ಯಾಂಕ್ಗಾಗಿ ಉಪಯೋಗಿಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.
ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ. ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಾರಿ ಮುಸ್ಲಿಂ ಸಹೋದರಿಯರ ಜತೆ ರಕ್ಷಾ ಬಂಧನ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದರಲ್ಲಿ ಅವರು ಮತ್ತು ಇತರ ಹಿರಿಯ ಬಿಜೆಪಿ ನಾಯಕರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಸಮಾಜದ ವರ್ಗಗಳಿಗೆ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ವಿವರಿಸಿದರು. ಸಭೆಯಲ್ಲಿ ಹಾಜರಿದ್ದ ಕೆಲವು ಸಂಸದರು, ಪ್ರಧಾನಿ ಮೋದಿ ಅವರು ಸಮಾಜದ ಪ್ರತಿಯೊಂದು ವರ್ಗದೊಂದಿಗೆ ತೊಡಗಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ನಂತರ ಮುಸ್ಲಿಂ ಸಮಾಜದಲ್ಲಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದರು. ಸರ್ಕಾರ ಈ ಪದ್ಧತಿಯನ್ನು ಅಪರಾಧ ಎಂದು ಘೋಷಿಸಿದೆ.
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…