ಚುನಾವಣಾ ಸಮಿಕ್ಷೆ(Exit poll) ಮಾಡಿದ ಅನೇಕ ಸಂಸ್ಥೆಗಳ ಪ್ರಕಾರ ಬಿಜೆಪಿ(BJP) ಬಹುಮತದೊಂದಿಗೆ(majority) ಮೂರನೇ ಭಾರಿ ಅಧಿಕಾರಕ್ಕೆ ಏರಲಿದ್ದಾರೆ ಎಂದು ಭವಿಷ್ಯ ನುಡಿದಿತ್ತು. ಆದರೆ ಲೋಕಸಭೆ ಚುನಾವಣಾ ಫಲಿತಾಂಶ(Result) ತಲೆ ಕೆಳಗಾಗಿಸಿತು. ಆದರೆ ಮೋದಿ ಮೂರನೇ ಭಾರಿ ಪ್ರಧಾನಿ ಹುದ್ದಗೇರುವುದು(PM Post) ಮಾತ್ರ ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಎನ್ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದಿದ್ದಾರೆ. ‘ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
– ಅಂತರ್ಜಾಲ ಮಾಹಿತಿ
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…