ಚುನಾವಣಾ ಸಮಿಕ್ಷೆ(Exit poll) ಮಾಡಿದ ಅನೇಕ ಸಂಸ್ಥೆಗಳ ಪ್ರಕಾರ ಬಿಜೆಪಿ(BJP) ಬಹುಮತದೊಂದಿಗೆ(majority) ಮೂರನೇ ಭಾರಿ ಅಧಿಕಾರಕ್ಕೆ ಏರಲಿದ್ದಾರೆ ಎಂದು ಭವಿಷ್ಯ ನುಡಿದಿತ್ತು. ಆದರೆ ಲೋಕಸಭೆ ಚುನಾವಣಾ ಫಲಿತಾಂಶ(Result) ತಲೆ ಕೆಳಗಾಗಿಸಿತು. ಆದರೆ ಮೋದಿ ಮೂರನೇ ಭಾರಿ ಪ್ರಧಾನಿ ಹುದ್ದಗೇರುವುದು(PM Post) ಮಾತ್ರ ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಎನ್ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದಿದ್ದಾರೆ. ‘ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
– ಅಂತರ್ಜಾಲ ಮಾಹಿತಿ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…