MIRROR FOCUS

ಬಜೆಟ್‌ನಲ್ಲಿ ಉಚಿತ ಭರವಸೆಗಳನ್ನು ಘೋಷಿಸದಂತೆ ಅಧಿಕಾರಿಗಳಿಗೆ PM ಮೋದಿ ಖಡಕ್‌ ಸೂಚನೆ

Share

ಕಳೆದ ಕರ್ನಾಟಕ(Karnataka) ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಉಚಿತ ಭರವಸೆಗಳನ್ನು(Free Guarantee) ನೀಡಿ ಅಧಿಕಾರಕ್ಕೆ ಬಂತು. ಮೊದಲು ಒಪ್ಪಿ ಅಪ್ಪಿಕೊಂಡ ಜನರೇ ಈಗ ಈ ಉಚಿತ ಯೋಜನೆಗಳ(Free Scheme) ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.ಉಚಿತಗಳು ದೇಶದ ಅರ್ಥಿಕತೆಗೆ ಹೊಡೆತವೂ ಹೌದು. ಹಾಗೆ ಈ ಉಚಿತ ಭರವಸೆಗಳನ್ನು ಉಳಿಸಕೊಂಡು ಹೋಗುವುದು ಬಹಳ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಉಚಿತ ಯೋಜನೆಗಳಿಗೆ ಆದ್ಯತೆ ನೀಡಲಿಲ್ಲ. 

Advertisement

ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್‌ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.

ಬಜೆಟ್‌ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು.

ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ.  ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್‌ ಸಿದ್ಧಪಡಿಸಿ ಎಂದು ಹೇಳಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

– ಅಂತರ್ಜಾಲ ಮಾಹಿತಿ

It is common for governments in power to make heavy promises and free announcements during Lok Sabha Elections. But in the Interim Budget presented this time, the central government has taken a bold decision to break the tradition of giving free promises.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

19 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

20 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

20 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

21 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

21 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

21 hours ago