Advertisement
MIRROR FOCUS

ಬಜೆಟ್‌ನಲ್ಲಿ ಉಚಿತ ಭರವಸೆಗಳನ್ನು ಘೋಷಿಸದಂತೆ ಅಧಿಕಾರಿಗಳಿಗೆ PM ಮೋದಿ ಖಡಕ್‌ ಸೂಚನೆ

Share

ಕಳೆದ ಕರ್ನಾಟಕ(Karnataka) ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಉಚಿತ ಭರವಸೆಗಳನ್ನು(Free Guarantee) ನೀಡಿ ಅಧಿಕಾರಕ್ಕೆ ಬಂತು. ಮೊದಲು ಒಪ್ಪಿ ಅಪ್ಪಿಕೊಂಡ ಜನರೇ ಈಗ ಈ ಉಚಿತ ಯೋಜನೆಗಳ(Free Scheme) ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.ಉಚಿತಗಳು ದೇಶದ ಅರ್ಥಿಕತೆಗೆ ಹೊಡೆತವೂ ಹೌದು. ಹಾಗೆ ಈ ಉಚಿತ ಭರವಸೆಗಳನ್ನು ಉಳಿಸಕೊಂಡು ಹೋಗುವುದು ಬಹಳ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಉಚಿತ ಯೋಜನೆಗಳಿಗೆ ಆದ್ಯತೆ ನೀಡಲಿಲ್ಲ. 

ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್‌ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.

ಬಜೆಟ್‌ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು.

ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ.  ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್‌ ಸಿದ್ಧಪಡಿಸಿ ಎಂದು ಹೇಳಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

– ಅಂತರ್ಜಾಲ ಮಾಹಿತಿ

It is common for governments in power to make heavy promises and free announcements during Lok Sabha Elections. But in the Interim Budget presented this time, the central government has taken a bold decision to break the tradition of giving free promises.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

3 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

4 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

11 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

17 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

17 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

1 day ago