Advertisement
MIRROR FOCUS

3ನೇ ಬಾರಿಗೆ ಮೋದಿ ಪ್ರಮಾಣವಚನ | ಕಾರ್ಯಕ್ರಮದಲ್ಲಿ ವಿದೇಶಿ ಗಣ್ಯರು, ಪೌರಕಾರ್ಮಿಕರು, ಆದಿವಾಸಿ ಮಹಿಳೆಯರು ಭಾಗಿ | ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ |

Share

ಸತತ ಮೂರನೇ ಬಾರಿಗೆ ನರೇಂದ್ರ ಮೋದಿ(Narendra Modi) ಅವರು ಪ್ರಧಾನಿಯಾಗಿ(Prime Minister) ಪ್ರಮಾಣವಚನ(Oath) ಸ್ವೀಕರಿಸಲಿದ್ದಾರೆ. ನಮೋ ಸರ್ಕಾರವು ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು(VVIP Guests) ಆಹ್ವಾನಿಸಿದೆ. ಭಾನುವಾರ ಸಂಜೆ 7:15 ಕ್ಕೆ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರಿಂದ ಹಿಡಿದು ವಿದೇಶಿ ಗಣ್ಯರು ಕೂಡ ಸಾಕ್ಷಿಯಾಗಲಿದ್ದಾರೆ. ಮೋದಿ ಹ್ಯಾಟ್ರಿಕ್ ಸಾಧನೆಯ ಈ ಸಮಾರಂಭಕ್ಕೆ 8 ರಿಂದ 9 ಸಾವಿರ ಮಂದಿ ಅತಿಥಿಗಳಿಗೆ ಆಹ್ವಾನ ನೀಡಿದ್ದು, ರಾಷ್ಟ್ರಪತಿ ಭವನದ (Rastrapathi Bhavan) ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

ಯಾರೆಗೆಲ್ಲ ಆಹ್ವಾನ..?: ಮೋದಿ (Narendra Modi) ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ತಾ ಯೋಜನೆ, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಮಿಕರು, ತೃತೀಯ ಲಿಂಗಿಗಳು, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ್ ಗಣಿ ಕಾರ್ಮಿಕರ ರಕ್ಷಿಸಿದ ತಂಡ, ವಂದೇ ಭಾರತ್, ಮೆಟ್ರೋದಂಥ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದವರು, ಎಲ್ಲಾ ಧರ್ಮಗಳ 50 ಧರ್ಮ ಗುರುಗಳಿಗೂ ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕøತರಿಗೆ, ವಿಕಸಿತ ಭಾರತ್ ಅಂಬಾಸಿಡರ್‍ಗಳು ಹಾಗೂ ಆದಿವಾಸಿ ಮಹಿಳೆಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

ವಿದೇಶಿ ಗಣ್ಯರು ಯಾರ‍್ಯಾರು..?: ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ್ ಅಧ್ಯಕ್ಷ ವಾವೆಲ್ ರಾಮ್‍ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುಗೆ ಆಹ್ವಾನ ನೀಡಲಾಗಿದೆ.

ರಾಷ್ಟ್ರಪತಿ ಭವನದ ಸುತ್ತ ಬಿಗಿಭದ್ರತೆ: ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗುತ್ತಿದೆ. ದೆಹಲಿ ಪೊಲೀಸರು 5 ಹಂತದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅರೆಸೈನಿಕ ಸಿಬ್ಬಂದಿ, ಎನ್‍ಎಸ್‍ಜಿ ಕಮಾಂಡೋಗಳು, ಡ್ರೋನ್‍ಗಳು, ಸ್ನೈಪರ್‍ಗಳ ಸೇರಿ ಬಹು ಹಂತದ ಭದ್ರತೆ ಕೈಗೊಳ್ಳಲಾಗುತ್ತಿದೆ. ರಾಷ್ಟ್ರಪತಿ ಭವನದ ಒಳಗೆ ಹಾಗೂ ಹೊರಗೆ 3 ಹಂತದಲ್ಲಿ ಭದ್ರತೆ ನೀಡಲಾಗುತ್ತಿದ್ದು, 5 ಕಂಪನಿಗಳ ಅರೆಸೇನಾಪಡೆ, ದೆಹಲಿ ಸಶಸ್ತ್ರ ಪೊಲೀಸ್ ಹೀಗೆ ಭದ್ರತೆಗಾಗಿ 2,500 ಪೊಲೀಸರ ಸುತ್ತಲೂ ನೇಮಕ ಮಾಡಲಾಗಿದೆ. ಗಣ್ಯರ ಮಾರ್ಗದಲ್ಲಿ ಸ್ನೈಪರ್‍ಗಳು, ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿದೇಶಿ ಗಣ್ಯರು ಉಳಿಯುವ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲೂ ಜಿ20 ಮಾದರಿಯಲ್ಲೇ ವಿಶೇಷ ಭದ್ರತೆ ನಿಯೋಜನೆ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

5 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

6 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

6 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

6 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

6 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

6 hours ago