ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……
ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.
“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…