Advertisement
MIRROR FOCUS

ಭಕ್ತರ ಇಷ್ಟಾರ್ಥ ಈಡೇರಿಸುವ ದೈವ | ಸಂತಾನ ಭಾಗ್ಯ, ಉದ್ಯೋಗ.. ಇತ್ಯಾದಿಗಳಿಗೆ ಈ ದೈವಕ್ಕೆ ಹರಿಕೆ | ಮೊಗ್ರದ ಶ್ರೀ ಭೈರಜ್ಜಿ ದೈವ |

Share

ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……

ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ  ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.

“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago