Advertisement
MIRROR FOCUS

ಭಕ್ತರ ಇಷ್ಟಾರ್ಥ ಈಡೇರಿಸುವ ದೈವ | ಸಂತಾನ ಭಾಗ್ಯ, ಉದ್ಯೋಗ.. ಇತ್ಯಾದಿಗಳಿಗೆ ಈ ದೈವಕ್ಕೆ ಹರಿಕೆ | ಮೊಗ್ರದ ಶ್ರೀ ಭೈರಜ್ಜಿ ದೈವ |

Share

ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……

ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ  ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.

“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago