Advertisement
ಸುದ್ದಿಗಳು

ಮೊಗ್ರ ಸೇತುವೆ | ದಶಕಗಳ ಬೇಡಿಕೆ ಈಡೇರಿಕೆಯ ನಿರೀಕ್ಷೆ | ಸಚಿವ ಅಂಗಾರ ಅವರಿಂದ ಗುದ್ದಲಿ ಪೂಜೆ | ಗುತ್ತಿಗಾರು ಗ್ರಾಪಂ ವ್ಯಾಪ್ತಿಯಲ್ಲಿ 4.36 ಕೋಟಿ ಅನುದಾನ ಬಳಕೆ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಮೊಗ್ರ ಸೇತುವೆ ಈಡೇರಿಕೆಯ ಭರವಸೆ ದೊರೆತಿದೆ. ಬುಧವಾರ ಸಚಿವ ಎಸ್‌ ಅಂಗಾರ ಅವರು ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಯು ಅತಿ ಶೀಘ್ರವೇ ಮುಗಿಯಲಿದೆ ಎಂದು ಸಚಿವರು ಭರವಸೆ ನೀಡಿದರು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿದೆ, ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದರು. ಗುತ್ತಿಗಾರು ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 4.36 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ಇದೇ ವೇಳೆ ನಡೆಯಿತು.

ಈ ಸಂದರ್ಭ ಜಿಲ್ಲಾ ಬಿಜೆಪಿ ಬಿ. ಜೆ. ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ, ಕೇಂದ್ರ ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ, ಮೊಗ್ರ ವಾರ್ಡ್ ಸದಸ್ಯರುಗಳಾದ ಶಾರದಾ ಮುತ್ಲಾಜೆ., ಲತಾ ಕಮಿಲ, ವಸಂತ ಮೊಗ್ರ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಬಾಲಕೃಷ್ಣ ಚಿಕ್ಮುಳಿ, ಪ್ರೇಮಲತಾ ಚಿಕ್ಮುಳಿ, ರಾಕೇಶ್ ಮೆಟ್ಟಿನಡ್ಕ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೆಸರಾದ ದೊಡ್ಡಣ್ಣ ಗೌಡ ಚಿಕ್ಮುಳಿ, ಉಮೇಶ್ ಮಕ್ಕಿ, ಗ್ರಾಮಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕ ಸುಧಾಕರ ಮಲ್ಕಜೆ ಮೊದಲಾದವರು ಇದ್ದರು.

ಗ್ರಾ.ಪಂ. ಮಾಜಿ ಸದಸ್ಯ ಜಯಪ್ರಕಾಶ್ ಮೊಗ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

10 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

14 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

23 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

23 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

23 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

23 hours ago