ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

Advertisement

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ...
Advertisement


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

52 minutes ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

1 hour ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

1 hour ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

21 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

24 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago