Advertisement
ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ...


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

7 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

11 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

15 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago