ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.
ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ ಬೇಡಿಕೆಗಳ ಪಟ್ಟು ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.
ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…