Advertisement
ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ...


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

7 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

8 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

8 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

8 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

8 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

16 hours ago