ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.
ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ ಬೇಡಿಕೆಗಳ ಪಟ್ಟು ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.
ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…