Advertisement
ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ...


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

26 minutes ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

54 minutes ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

10 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

12 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

19 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago