Advertisement
ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ...


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

8 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

22 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

22 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

22 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago