ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.
ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ ಬೇಡಿಕೆಗಳ ಪಟ್ಟು ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.
ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…