ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ ಶ್ರೀ ಭೈರಜ್ಜಿ ದೈವದ ನೇಮ ನಡೆಯಿತು.
ಮೊಗ್ರ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ದೈವಗಳ ನೇಮ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ ಕನ್ನಡ ದೇವತೆ ಯಾನೆ ಅಜ್ಜಿ ದೈವದ ನೇಮ ನಡೆಯಿತು. ಸಾವಿರಾರು ಭಕ್ತಾದಿಗಳು ಈ ಸಂದರ್ಭ ಪಾಲ್ಗೊಂಡರು. ಶ್ರೀ ಭೈರಜ್ಜಿ ದೈವವು ಅತ್ಯಂತ ಕಾರಣಿಕ ಹಾಗೂ ಪ್ರಸಿದ್ಧ ದೈವವಾಗಿದೆ. ಭಕ್ತಾದಿಗಳ ಇಷ್ಟಾರ್ಥ ಈಡೇರಿಸುವ ದೈವವಾಗಿದ್ದು,ಸತ್ಯ, ಧರ್ಮ , ನ್ಯಾಯಕ್ಕೆ ಇಲ್ಲಿ ಯಾವತ್ತೂ ಅಪಚಾರವಾಗದು ಎಂಬ ನಂಬಿಕೆ ಇದೆ.
ಭಕ್ತಾದಿಗಳು ಈ ದೈವದ ಮುಂದೆ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಸೀರೆ ಹರಿಕೆ, ಕತ್ತಿ ಹರಿಕೆ ಸೇರಿದಂತೆ ವಿವಿಧ ಹರಿಕೆಗಳನ್ನು ಅರ್ಪಿಸುತ್ತಾರೆ. ಸಚಿವ ಅಂಗಾರ ಸೇರಿದಂತೆ ಹಲವು ಪ್ರಮುಖರು ಇಲ್ಲಿ ದೈವಾರಾಧನೆಗೆ ಅದರಲ್ಲೂ ಶ್ರೀ ಭೈರಜ್ಜಿ ದೈವದ ನೇಮಕ್ಕೆ ಆಗಮಿಸುತ್ತಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…