ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು. ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…