ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು. ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…