ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು. ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…