ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು. ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…