ಮೊಗ್ರ ದೇವಸ್ಥಾನ | 48 ದಿನಗಳ ಕಾಲ ನಿರಂತರ ಗಣಪತಿ ಹವನ |

March 17, 2021
2:19 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48  ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.

ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು ನಿರ್ವಿಘ್ನವಾಗಿ ನಡೆಯಲು ಹಾಗೂ ಊರಿನ ಸಮಸ್ತ ಭಕ್ತರ ಹಿತಕ್ಕಾಗಿ 48  ದಿನಗಳ ಕಾಲ ನಿರಂತರವಾಗಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ  ನಡೆಯಲಿದೆ. 14  ಬೈಲುಗಳ ಮೂಲಕ ನಿರಂತರವಾಗಿ ಈ ಕಾರ್ಯ ನಡೆಯಲಿದೆ.

ಬುಧವಾರದಂದು ವೇ.ಮೂ.ಕೃಷ್ಣ ಭಟ್‌ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ  ವೆಂಕಟ್ರಮಣ ಎಂ ಎನ್‌, ದೊಡ್ಡಣ್ಣ ಗೌಡ ಚಿಕ್ಮುಳಿ,  ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್‌ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror