Advertisement
ಧಾರ್ಮಿಕ

ಮೊಗ್ರ ದೇವಸ್ಥಾನ | 48 ದಿನಗಳ ಕಾಲ ನಿರಂತರ ಗಣಪತಿ ಹವನ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48  ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.

Advertisement
Advertisement
Advertisement
Advertisement
Advertisement
ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು ನಿರ್ವಿಘ್ನವಾಗಿ ನಡೆಯಲು ಹಾಗೂ ಊರಿನ ಸಮಸ್ತ ಭಕ್ತರ ಹಿತಕ್ಕಾಗಿ 48  ದಿನಗಳ ಕಾಲ ನಿರಂತರವಾಗಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ  ನಡೆಯಲಿದೆ. 14  ಬೈಲುಗಳ ಮೂಲಕ ನಿರಂತರವಾಗಿ ಈ ಕಾರ್ಯ ನಡೆಯಲಿದೆ.

Advertisement

ಬುಧವಾರದಂದು ವೇ.ಮೂ.ಕೃಷ್ಣ ಭಟ್‌ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ  ವೆಂಕಟ್ರಮಣ ಎಂ ಎನ್‌, ದೊಡ್ಡಣ್ಣ ಗೌಡ ಚಿಕ್ಮುಳಿ,  ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್‌ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.

Advertisement

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago