Advertisement
ಧಾರ್ಮಿಕ

ಮೊಗ್ರ ದೇವಸ್ಥಾನ | 48 ದಿನಗಳ ಕಾಲ ನಿರಂತರ ಗಣಪತಿ ಹವನ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48  ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.

ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು ನಿರ್ವಿಘ್ನವಾಗಿ ನಡೆಯಲು ಹಾಗೂ ಊರಿನ ಸಮಸ್ತ ಭಕ್ತರ ಹಿತಕ್ಕಾಗಿ 48  ದಿನಗಳ ಕಾಲ ನಿರಂತರವಾಗಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ  ನಡೆಯಲಿದೆ. 14  ಬೈಲುಗಳ ಮೂಲಕ ನಿರಂತರವಾಗಿ ಈ ಕಾರ್ಯ ನಡೆಯಲಿದೆ.

ಬುಧವಾರದಂದು ವೇ.ಮೂ.ಕೃಷ್ಣ ಭಟ್‌ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ  ವೆಂಕಟ್ರಮಣ ಎಂ ಎನ್‌, ದೊಡ್ಡಣ್ಣ ಗೌಡ ಚಿಕ್ಮುಳಿ,  ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್‌ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

24 minutes ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

59 minutes ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

3 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

14 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

18 hours ago