MIRROR FOCUS

ಕಲಾವಿದ ಮೋಹನ್‌ ಸೋನಾ ಇನ್ನಿಲ್ಲ | ಗ್ರಾಮೀಣ ಭಾಗದ ಮೇರು ಕಲಾವಿದ ಮೋಹನ್ |

Share
ಪ್ರಸಿದ್ದ ಕಲಾವಿದ ಮೋಹನ್‌ ಸೋನಾ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಗ್ರಾಮೀಣ ಭಾಗದ ಮೇರು ಕಲಾವಿದರಾಗಿದ್ದ ಮೋಹನ್‌  ಸೋನಾ ಚಿತ್ರ ಕಲಾವಿದರಾಗಿ, ನಟರಾಗಿ, ಸೃಜನಶೀಲ ಕಲಾವಿದರಾಗಿ , ನಾಟಕಕಾರರಾಗಿ , ನಿರ್ದೇಶಕರಾಗಿ ಹೆಸರು ಮಾಡಿದ್ದರು.
ಚೋಮ, ನಾಳೆ ಯಾರಿಗೂ ಇಲ್ಲ ತೆರಗಳಲ್ಲಿ ಅಭಿನಯ ಮಾಡಿದ್ದರು. ಸೋಣಂಗೇರಿಯ ಬಯಲು ಚಿತ್ರಾಲಯ ರಾಜ್ಯದಲ್ಲಿ ಪ್ರಸಿದ್ಧವಾಗಿತ್ತು.  ಮೋಹನ್‌ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೋಹನ್‌ ಸೋನಾ ಬಗ್ಗೆ ಕಲಾವಿದ ಜೀವನ್‌ ರಾಂ ಅವರ ಪೇಸ್‌ ಬುಕ್‌ ವಾಲಲ್ಲಿ ಹೀಗೆ ಬರೆದಿದ್ದಾರೆ..
This is box title
ನಿಮ್ಮ ಬಗ್ಗೆ ನಾನೇನು ಹೇಳಲಿ ಸೋನ !?? ನನ್ನ 30 ವರ್ಷದ ರಂಗ ಬದುಕಿನಲ್ಲಿ ನಿಮ್ಮಂತಹ ಮೇರು ವ್ಯಕ್ತಿತ್ವದ ಮತ್ತೊಬ್ಬ ಕಲಾವಿದನನ್ನು ನಾನು ಕಂಡಿಲ್ಲ.ನಿಮ್ಮನ್ನು ನೋಡಿಕೊಂಡೇ ಬೆಳೆದವನು ನಾನು. ನನಗೂ ಗುರು ನೀವು.  ಕಳೆದ ಐದು ತಿಂಗಳಿನಿಂದಂತೂ ನಿಮ್ಮ ಬಗೆಗಿನ ಸಾಕ್ಷ್ಯಚಿತ್ರ ನಿರ್ಮಾಣದ ನೆಪದಲ್ಲಿ….ಸೋನ.. ಸೋನ… ಸೋನ…ಸೋನ ಅಂತ ಅದೆಷ್ಟು ಸಾವಿರ ಬಾರಿ ನನ್ನ ನಾಲಗೆ ನುಡಿದಿರಬಹುದೋ!! ಕಲೆ,ಶಿಕ್ಷಣ,ರಂಗಭೂಮಿಯ ವಿಷಯದಲ್ಲಿ ನಿಮಗಿರುವ ಅಪಾರ ಜ್ಞಾನದ ವಿಶ್ವರೂಪ ದರ್ಶನ ಮಾಡಿಸಿಕೊಳ್ಳುತ್ತಿದ್ದೆ..ಮೋಸ ಮಾಡಿದ್ರಿ ನೀವು…ಕೋಪ ಸೋನ.!! ಪ್ರತಿದಿನ ಪ್ರತಿಕ್ಷಣ ನೀವೇ ನನ್ನೊಳಗಿದ್ದು ನನ್ನೊಳಗಿನ ಕ್ರಿಯಾಶೀಲತೆಯನ್ನು ಹೊರಹಾಕ್ತಿದ್ರೀ ಅನಿಸ್ತದೆ.ಈ ಸಾಕ್ಷ್ಯಚಿತ್ರವನ್ನು ಲೋಕ ನೋಡುವುದು ಆಮೇಲಿನ ಮಾತು…ಮೊದಲು ನೀವು ನೋಡಬೇಕೆಂಬ ಹಂಬಲ ನನ್ನದಾಗಿತ್ತು.  …ಖಂಡಿತ ನಾನು ತಡ ಮಾಡಿಲ್ಲ..ನೀವೇ ಹೋಗಲು ಅವಸರಿಸಿದ್ರಿ…  ಬೇಗನೇ ಮುಗಿಸುವೆ ಕೆಲಸ..ನೋಡಬೇಕು ನೀವು. ಮತ್ತೆ ಹುಟ್ಟಿ ಬರುವಿರೆಂಬ ನಂಬಿಕೆಯಲ್ಲಿ…!!
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

26 minutes ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

1 hour ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

1 hour ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ…

1 hour ago

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

7 hours ago