Advertisement
MIRROR FOCUS

ಕಲಾವಿದ ಮೋಹನ್‌ ಸೋನಾ ಇನ್ನಿಲ್ಲ | ಗ್ರಾಮೀಣ ಭಾಗದ ಮೇರು ಕಲಾವಿದ ಮೋಹನ್ |

Share
ಪ್ರಸಿದ್ದ ಕಲಾವಿದ ಮೋಹನ್‌ ಸೋನಾ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಗ್ರಾಮೀಣ ಭಾಗದ ಮೇರು ಕಲಾವಿದರಾಗಿದ್ದ ಮೋಹನ್‌  ಸೋನಾ ಚಿತ್ರ ಕಲಾವಿದರಾಗಿ, ನಟರಾಗಿ, ಸೃಜನಶೀಲ ಕಲಾವಿದರಾಗಿ , ನಾಟಕಕಾರರಾಗಿ , ನಿರ್ದೇಶಕರಾಗಿ ಹೆಸರು ಮಾಡಿದ್ದರು.
ಚೋಮ, ನಾಳೆ ಯಾರಿಗೂ ಇಲ್ಲ ತೆರಗಳಲ್ಲಿ ಅಭಿನಯ ಮಾಡಿದ್ದರು. ಸೋಣಂಗೇರಿಯ ಬಯಲು ಚಿತ್ರಾಲಯ ರಾಜ್ಯದಲ್ಲಿ ಪ್ರಸಿದ್ಧವಾಗಿತ್ತು.  ಮೋಹನ್‌ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೋಹನ್‌ ಸೋನಾ ಬಗ್ಗೆ ಕಲಾವಿದ ಜೀವನ್‌ ರಾಂ ಅವರ ಪೇಸ್‌ ಬುಕ್‌ ವಾಲಲ್ಲಿ ಹೀಗೆ ಬರೆದಿದ್ದಾರೆ..
This is box title
ನಿಮ್ಮ ಬಗ್ಗೆ ನಾನೇನು ಹೇಳಲಿ ಸೋನ !?? ನನ್ನ 30 ವರ್ಷದ ರಂಗ ಬದುಕಿನಲ್ಲಿ ನಿಮ್ಮಂತಹ ಮೇರು ವ್ಯಕ್ತಿತ್ವದ ಮತ್ತೊಬ್ಬ ಕಲಾವಿದನನ್ನು ನಾನು ಕಂಡಿಲ್ಲ.ನಿಮ್ಮನ್ನು ನೋಡಿಕೊಂಡೇ ಬೆಳೆದವನು ನಾನು. ನನಗೂ ಗುರು ನೀವು.  ಕಳೆದ ಐದು ತಿಂಗಳಿನಿಂದಂತೂ ನಿಮ್ಮ ಬಗೆಗಿನ ಸಾಕ್ಷ್ಯಚಿತ್ರ ನಿರ್ಮಾಣದ ನೆಪದಲ್ಲಿ….ಸೋನ.. ಸೋನ… ಸೋನ…ಸೋನ ಅಂತ ಅದೆಷ್ಟು ಸಾವಿರ ಬಾರಿ ನನ್ನ ನಾಲಗೆ ನುಡಿದಿರಬಹುದೋ!! ಕಲೆ,ಶಿಕ್ಷಣ,ರಂಗಭೂಮಿಯ ವಿಷಯದಲ್ಲಿ ನಿಮಗಿರುವ ಅಪಾರ ಜ್ಞಾನದ ವಿಶ್ವರೂಪ ದರ್ಶನ ಮಾಡಿಸಿಕೊಳ್ಳುತ್ತಿದ್ದೆ..ಮೋಸ ಮಾಡಿದ್ರಿ ನೀವು…ಕೋಪ ಸೋನ.!! ಪ್ರತಿದಿನ ಪ್ರತಿಕ್ಷಣ ನೀವೇ ನನ್ನೊಳಗಿದ್ದು ನನ್ನೊಳಗಿನ ಕ್ರಿಯಾಶೀಲತೆಯನ್ನು ಹೊರಹಾಕ್ತಿದ್ರೀ ಅನಿಸ್ತದೆ.ಈ ಸಾಕ್ಷ್ಯಚಿತ್ರವನ್ನು ಲೋಕ ನೋಡುವುದು ಆಮೇಲಿನ ಮಾತು…ಮೊದಲು ನೀವು ನೋಡಬೇಕೆಂಬ ಹಂಬಲ ನನ್ನದಾಗಿತ್ತು.  …ಖಂಡಿತ ನಾನು ತಡ ಮಾಡಿಲ್ಲ..ನೀವೇ ಹೋಗಲು ಅವಸರಿಸಿದ್ರಿ…  ಬೇಗನೇ ಮುಗಿಸುವೆ ಕೆಲಸ..ನೋಡಬೇಕು ನೀವು. ಮತ್ತೆ ಹುಟ್ಟಿ ಬರುವಿರೆಂಬ ನಂಬಿಕೆಯಲ್ಲಿ…!!
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

10 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

15 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

15 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago