Advertisement
MIRROR FOCUS

ಅಯೋಧ್ಯೆ ಶ್ರೀರಾಮ ಪೂಜೆಯ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” | ಯಾರು ಇವರು..? ಎಲ್ಲಿಯ ಹುಡುಗ..?

Share

ಅಯೋಧ್ಯೆಯಲ್ಲಿ ಶ್ರೀರಾಮ(Ayodya) ಮಂದಿರ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ. ಅಂದರೆ ಮುಂದಿನ ತಿಂಗಳು ಅಂದರೆ 2024ರ ಜನವರಿ 22ರಂದು ರಾಮಮಂದಿರ(Ram Mandir) ಲೋಕಾರ್ಪಣೆಗೊಳ್ಳುತ್ತಿದೆ(Inauguration). ಹಾಗಾಗಿ  ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಕೆಲ ದಿನಗಳ ಹಿಂದೆ ಸಂದರ್ಶನ(Interview) ಕರೆಯಲಾಗಿತ್ತು. ಇದೀಗ ಯುವ ಪುರೋಹಿತ, ಸಕಲ ವೇದ ಪಾರಂಗತ, ಭಾಗ್ಯವಂತ “ಮೋಹಿತ್ ಪಾಂಡೆ”(Mohit Panday) ಆಯ್ಕೆಯಾಗಿದ್ದಾರೆ.

Advertisement
Advertisement

ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇದಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ,ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನೀಯನಾಗಿ ಆಯ್ಕೆಯಾದ ಭಾಗ್ಯವಂತ. ಯುವ ಪುರೋಹಿತರು “ಗಾಜಿಯಾಬಾದ್ ನ ಧುದೇಶ್ವರನಾಥ ಮಠ ಮತ್ತು ವೆಂಕಟೇಶ್ವರ ವೇದಿಕ್” ಯುನಿವರ್ಸಿಟಿಯ ವಿದ್ಯಾರ್ಥಿಯಾಗಿದ್ದಾರೆ. ವಿಶೇಷವೆಂದರೆ ಇಲ್ಲಿ ವೇದ ಮತ್ತು ಜ್ಞಾನಕ್ಕೆ ಮಹತ್ವ ನೀಡಿ ಆಯ್ಕೆ ಮಾಡಲಾಗಿದೆಯೇ ಹೊರತು ಯಾವುದೇ ಜಾತಿ ಅಥವಾ ಮೀಸಲಾತಿಗೆ ಮನ್ನಣೆ ನೀಡಲಾಗಿಲ್ಲ…!

ಉತ್ತರ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಗಾಜಿಯಾಬಾದ್‌ನ ಶ್ರೀ ದೂಧೇಶ್ವರನಾಥ ಮಠ ದೇವಾಲಯದ ಆವರಣದಲ್ಲಿ ದೂಧೇಶ್ವರ ವೇದ ವಿದ್ಯಾಪೀಠವನ್ನು ಸ್ಥಾಪಿಸಲಾಗಿದೆ. ಪ್ರಪಂಚದಾದ್ಯಂತ ಪ್ರತಿದಿನ ಪ್ರಪಂಚದಾದ್ಯಂತ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.  ಮೊದಲು ಅರ್ಚಕರಾಗುವ ಎಲ್ಲರಿಗೂ ಆರು ತಿಂಗಳಗಳು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಈ ವೇದ ವಿದ್ಯಾಪೀಠರದಲ್ಲಿ ಸುಮಾರು 70 ವಿದ್ಯಾರ್ಥಿಗಳು ದೇಶ ಮತ್ತು ವಿದೇಶದ ವಿವಿಧ ದೇವಾಲಯಗಳಲ್ಲಿ ಅರ್ಚಕರು ಹಾಗೂ ಆಚಾರ್ಯರಾಗಿ ಸೇವೆ ಸಲ್ಲಿಸಲು ತರಬೇತಿ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಇಲ್ಲಿ ವೇದ, ಸಂಸ್ಕಾರ ಕಲಿಸಲಾಗಿದೆ. 23 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತಿದೆ.

ಸಂಸ್ಥೆಯಲ್ಲಿ ಆಚಾರ್ಯರಾಗಿ ಕಾರ್ಯನಿರ್ವಹಿಸುತ್ತಿರುವ ನಿತ್ಯಾನಂದ ಅವರು ಮಾತನಾಡಿ ʼಮೋಹಿತ್‌ ಪಾಂಡೆ ಅವರು ದೂದೇಶ್ವರ ವೇದ ವಿದ್ಯಾಪೀಠದಲ್ಲಿ ಏಳು ವರ್ಷಗಳ ಕಾಲ ಅಧ್ಯಯನ ಮಾಡಿದ ನಂತರ ತಿರುಪತಿಯ ವೆಂಕಟೇಶ್ವರ ವೇದಿಕ್‌ ವಿಶ್ವವಿದ್ಯಾಲಯಕ್ಕೆ ತೆರಳಿದರು. ವಿದ್ಯಾರ್ಥಿಗಳಿಗೆ ಧರ್ಮ, ಸಂಸ್ಕಾರಗಳ ಬಗ್ಗೆ ತಿಳುವಳಿಕೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ನಮ್ಮ ಉದ್ದೇಶವಾಗಿದೆʼ ಎಂದಿದ್ದಾರೆ.

ದೂಧೇಶ್ವರ ವೇದ ವಿದ್ಯಾಪೀಠದಲ್ಲಿ ನಿಯಮಾವಳಿಗಳು ತುಂಬಾ ಕಟ್ಟುನಿಟ್ಟಾಗಿದ್ದು, ಇಲ್ಲಿಂದ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ ಎಂದರ್ಥ. ದೂಧೇಶ್ವರ ವೇದ ವಿದ್ಯಾಪೀಠದ ವಿದ್ಯಾರ್ಥಿಗಳು ಬೆಳಿಗ್ಗೆ 4:00 ಗಂಟೆಗೆ ಏಳುತ್ತಾರೆ ಮತ್ತು ರಾತ್ರಿ 10:00 ರವರೆಗೆ ಕಟ್ಟುನಿಟ್ಟಾದ ದಿನಚರಿಯನ್ನು ಅನುಸರಿಸುತ್ತಾರೆ.

– ಅಂತರ್ಜಾಲ ಮಾಹಿತಿ

Ayodhya, will be inaugurated soon. That means next month i.e. 22 January 2024, Ram Mandir will be inaugurated. So, an interview was called a few days ago for the priestly service of Sri Rama in Sri Rama temple. Now a young priest, well-versed in all Vedas, blessed "Mohit Panday" has been selected.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

17 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

17 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

17 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

18 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

18 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

18 hours ago