Advertisement
MIRROR FOCUS

ಅಯೋಧ್ಯೆ ಶ್ರೀರಾಮ ಪೂಜೆಯ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” | ಯಾರು ಇವರು..? ಎಲ್ಲಿಯ ಹುಡುಗ..?

Share

ಅಯೋಧ್ಯೆಯಲ್ಲಿ ಶ್ರೀರಾಮ(Ayodya) ಮಂದಿರ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ. ಅಂದರೆ ಮುಂದಿನ ತಿಂಗಳು ಅಂದರೆ 2024ರ ಜನವರಿ 22ರಂದು ರಾಮಮಂದಿರ(Ram Mandir) ಲೋಕಾರ್ಪಣೆಗೊಳ್ಳುತ್ತಿದೆ(Inauguration). ಹಾಗಾಗಿ  ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಕೆಲ ದಿನಗಳ ಹಿಂದೆ ಸಂದರ್ಶನ(Interview) ಕರೆಯಲಾಗಿತ್ತು. ಇದೀಗ ಯುವ ಪುರೋಹಿತ, ಸಕಲ ವೇದ ಪಾರಂಗತ, ಭಾಗ್ಯವಂತ “ಮೋಹಿತ್ ಪಾಂಡೆ”(Mohit Panday) ಆಯ್ಕೆಯಾಗಿದ್ದಾರೆ.

ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇದಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ,ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನೀಯನಾಗಿ ಆಯ್ಕೆಯಾದ ಭಾಗ್ಯವಂತ. ಯುವ ಪುರೋಹಿತರು “ಗಾಜಿಯಾಬಾದ್ ನ ಧುದೇಶ್ವರನಾಥ ಮಠ ಮತ್ತು ವೆಂಕಟೇಶ್ವರ ವೇದಿಕ್” ಯುನಿವರ್ಸಿಟಿಯ ವಿದ್ಯಾರ್ಥಿಯಾಗಿದ್ದಾರೆ. ವಿಶೇಷವೆಂದರೆ ಇಲ್ಲಿ ವೇದ ಮತ್ತು ಜ್ಞಾನಕ್ಕೆ ಮಹತ್ವ ನೀಡಿ ಆಯ್ಕೆ ಮಾಡಲಾಗಿದೆಯೇ ಹೊರತು ಯಾವುದೇ ಜಾತಿ ಅಥವಾ ಮೀಸಲಾತಿಗೆ ಮನ್ನಣೆ ನೀಡಲಾಗಿಲ್ಲ…!

ಉತ್ತರ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಗಾಜಿಯಾಬಾದ್‌ನ ಶ್ರೀ ದೂಧೇಶ್ವರನಾಥ ಮಠ ದೇವಾಲಯದ ಆವರಣದಲ್ಲಿ ದೂಧೇಶ್ವರ ವೇದ ವಿದ್ಯಾಪೀಠವನ್ನು ಸ್ಥಾಪಿಸಲಾಗಿದೆ. ಪ್ರಪಂಚದಾದ್ಯಂತ ಪ್ರತಿದಿನ ಪ್ರಪಂಚದಾದ್ಯಂತ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.  ಮೊದಲು ಅರ್ಚಕರಾಗುವ ಎಲ್ಲರಿಗೂ ಆರು ತಿಂಗಳಗಳು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಈ ವೇದ ವಿದ್ಯಾಪೀಠರದಲ್ಲಿ ಸುಮಾರು 70 ವಿದ್ಯಾರ್ಥಿಗಳು ದೇಶ ಮತ್ತು ವಿದೇಶದ ವಿವಿಧ ದೇವಾಲಯಗಳಲ್ಲಿ ಅರ್ಚಕರು ಹಾಗೂ ಆಚಾರ್ಯರಾಗಿ ಸೇವೆ ಸಲ್ಲಿಸಲು ತರಬೇತಿ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಇಲ್ಲಿ ವೇದ, ಸಂಸ್ಕಾರ ಕಲಿಸಲಾಗಿದೆ. 23 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತಿದೆ.

ಸಂಸ್ಥೆಯಲ್ಲಿ ಆಚಾರ್ಯರಾಗಿ ಕಾರ್ಯನಿರ್ವಹಿಸುತ್ತಿರುವ ನಿತ್ಯಾನಂದ ಅವರು ಮಾತನಾಡಿ ʼಮೋಹಿತ್‌ ಪಾಂಡೆ ಅವರು ದೂದೇಶ್ವರ ವೇದ ವಿದ್ಯಾಪೀಠದಲ್ಲಿ ಏಳು ವರ್ಷಗಳ ಕಾಲ ಅಧ್ಯಯನ ಮಾಡಿದ ನಂತರ ತಿರುಪತಿಯ ವೆಂಕಟೇಶ್ವರ ವೇದಿಕ್‌ ವಿಶ್ವವಿದ್ಯಾಲಯಕ್ಕೆ ತೆರಳಿದರು. ವಿದ್ಯಾರ್ಥಿಗಳಿಗೆ ಧರ್ಮ, ಸಂಸ್ಕಾರಗಳ ಬಗ್ಗೆ ತಿಳುವಳಿಕೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ನಮ್ಮ ಉದ್ದೇಶವಾಗಿದೆʼ ಎಂದಿದ್ದಾರೆ.

ದೂಧೇಶ್ವರ ವೇದ ವಿದ್ಯಾಪೀಠದಲ್ಲಿ ನಿಯಮಾವಳಿಗಳು ತುಂಬಾ ಕಟ್ಟುನಿಟ್ಟಾಗಿದ್ದು, ಇಲ್ಲಿಂದ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ ಎಂದರ್ಥ. ದೂಧೇಶ್ವರ ವೇದ ವಿದ್ಯಾಪೀಠದ ವಿದ್ಯಾರ್ಥಿಗಳು ಬೆಳಿಗ್ಗೆ 4:00 ಗಂಟೆಗೆ ಏಳುತ್ತಾರೆ ಮತ್ತು ರಾತ್ರಿ 10:00 ರವರೆಗೆ ಕಟ್ಟುನಿಟ್ಟಾದ ದಿನಚರಿಯನ್ನು ಅನುಸರಿಸುತ್ತಾರೆ.

– ಅಂತರ್ಜಾಲ ಮಾಹಿತಿ

Ayodhya, will be inaugurated soon. That means next month i.e. 22 January 2024, Ram Mandir will be inaugurated. So, an interview was called a few days ago for the priestly service of Sri Rama in Sri Rama temple. Now a young priest, well-versed in all Vedas, blessed "Mohit Panday" has been selected.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

49 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago