ದೇವಾಲಯದ ಹುಂಡಿಗೆ ಸೇರಿದ ಹಣ ದೇವರಿಗೆ : ಸುಪ್ರೀಂ ಕೋರ್ಟ್

December 7, 2025
3:23 PM

ಭಕ್ತಾಧಿಗಳು ಭಕ್ತಿಯಿಂದ ದೇವಾಲಯದ ಹುಂಡಿಗೆ ಸಲ್ಲಿಸಿದ ಹಣವನ್ನು ಸಹಕಾರಿ ಬ್ಯಾಂಕುಗಳು ಅನ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳದ ಹೈಕೋರ್ಟ್ ನೀಡಿದ ನಿರ್ದೇಶವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರ ಬ್ಯಾಂಕುಗಳು ಪ್ರಶ್ನಿಸಿ ಕೇರಳದ ಕೆಲವ ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ.

ಪೀಠ ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು, ಅರ್ಜಿದಾರರಿಗೆ ಸಮಯ ವಿಸ್ತರಣೆಯನ್ನು ಕೋರಿ ಹೈಕೋರ್ಟ್ ನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ. ತಿರುನೆಲ್ಲಿ ಸರ್ವಿಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಸುಶೀಲಾ ಗೋಪಾಲನ್ ಸ್ಮಾರಕ ವನಿತಾ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ರೂರಲ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ವಯನಾಡ್ ಟೆಂಪಲ್ ಎಂಪ್ಲಾಯೀಸ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್-ದೇವಸ್ವಂನ ಠೇವಣಿಗಳನ್ನು ಮುಕ್ತಾಯಗೊಳಿಸಿ ಎರಡು ತಿಂಗಳೊಳಗೆ ಮರುಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror