ಬಾಯಿ ಬಿಟ್ಟ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರು | ವಿದೇಶದಲ್ಲಿ ಕುಳಿತು ಉಗ್ರವಾದಕ್ಕೆ ಮಸಲತ್ತು ಮಾಡಿದ್ದ ಖದೀಮ…! |

July 20, 2023
10:35 AM
ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಆರೋಪಿ ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಫಂಡ್ ಕೊಡುತ್ತಿದ್ದ ಎನ್ನುವ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರನ್ನೇ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ನಿನ್ನೆ ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ರು. ಆದ್ರೆ ಅವರ ಮುಂದಿನ ಯೋಜನೆಗಳ ಬಗ್ಗೆ ಕೇಳಿದ್ರೆ ಇಡೀ ನಾಡೇ ಬೆಚ್ಚಿ ಬೀಳುತ್ತೆ. ಸಿಸಿಬಿ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿ ತನಿಖೆ ಶುರುಮಾಡಿದೆ ತನಿಖೆ ವೇಳೆ ಸ್ಪೋಟಕ ಅಂಶಗಳು ಹೊರಬರುತ್ತಿದೆ.. ಹಣದ ಮೂಲ. ಹಾಗು ಸಿಕ್ಕ ಜೀವಂತ ಗುಂಡುಗಳು ಬೇರೆಯದ್ದೆ ಕಥೆ ಹೇಳುತ್ತಿವೆ.

Advertisement

ಸಿಸಿಬಿ ಕೈಯಲ್ಲಿ ಲಾಕ್ ಆಗಿರುವ ಕ್ರಿಮಿಗಳ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಎ2 ಆರೋಪಿ ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಫಂಡ್ ಕೊಡುತ್ತಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. 2017 ರಲ್ಲಿ ಕೊಲೆ ಕೇಸ್ ಬಳಿಕ 2020ರಲ್ಲಿ ರಕ್ತ ಚಂದನ ಕೇಸ್, 2021ರಲ್ಲಿ ಎರಡು ಬಾರಿ ದರೋಡೆಗೆ ಸಂಚು ಪ್ರಕರಣದಲ್ಲಿ ಜೈಲು ಸೇರಿದ್ದ ಜುನೈದ್, 2021ರಲ್ಲಿ ಜೈಲಿಂದ ರಿಲೀಸ್ ಆದ್ಮೇಲೆ ನಾಪತ್ತೆಯಾಗಿದ್ದ. ಈಗ ವಿದೇಶದಲ್ಲಿ ಕುಳಿತು ಉಗ್ರವಾದಕ್ಕೆ ಮಸಲತ್ತು ಆತಂಕ ಮೂಡಿಸಿದೆ.. ಶಸ್ತ್ರಾಸ್ತ್ರ ಖರೀದಿಗೆ ಹಣ ಕೊಡುತ್ತಿದ್ದು, ಈ ಪಿಸ್ತೂಲ್, ಗುಂಡುಗಳು ಗುಜರಾತ್ ಮತ್ತು ಉತ್ತರ ಪ್ರದೇಶದಿಂದ ಬಂದಿರಬಹುದು ಎಂಬ ಮಾಹಿತಿ ಇದೆ.

ಇನ್ನು ಕಾರ್ಯಚರಣೆ ವೇಳೆ ಶಂಕಿತ ಉಗ್ರರ ಬಳಿ ಸಿಕ್ಕಿರುವ ವಾಕಿಟಾಕಿ ಸುತ್ತ ಹಲವಾರು ಸಂಶಯಗಳು ಹುಟ್ಟಿಕೊಂಡಿವೆ. ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆ ವಾಕಿಟಾಕಿ ಬಳಕೆ ಮಾಡಲಾಗುತ್ತೆ. ಕಾಡಿನಲ್ಲಿ ಟ್ರೈನಿಂಗ್ ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತೆ. ಒಂದ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡದ ಮೇಲೆ ಅಟ್ಯಾಕ್ ಮಾಡಿದಾಗ ಪೊಲೀಸರು ಎಂಟ್ರಿ ಕೊಟ್ರೆ ಜಾಮರ್ ಬಳುತ್ತಾರೆ. ಈ ವೇಳೆ ಮೊಬೈಲ್ ವರ್ಕ್ ಆಗುವುದಿಲ್ಲ. ಹೀಗಾಗಿ ಆ ಸಮಯದಲ್ಲಿ ವಾಕಿಟಾಕಿ ಬಳಕೆ ಮಾಡುವ ಸಾದ್ಯತೆ ಇದೆ. ಮುಂಬಯಿ ಅಟ್ಯಾಕ್ ಮಾದರಿಯಲ್ಲಿ ಕೃತ್ಯ ಎಸಗಿದ್ರೆ ವಾಕಿಟಾಕಿ ಸಹಾಯಕಾರಿ. ಹೀಗಾಗಿ ಬಂಧಿತರ ಅಸಲಿ ಪ್ಲ್ಯಾನ್​ ಏನು ಎಂದು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಎನ್​ಐಎ ಅಧಿಕಾರಿಗಳು ಸಹ ಸಿಸಿಬಿ ತನಿಖೆಯ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ. ಅವಶ್ಯಕತೆ ಇದ್ದಲಿ ಕೇಸ್ ಮುಂದಿನ ಹಂತದಲ್ಲಿ ಎನ್ ಐ ಎ ತನಿಖೆ ನಡೆಸುವಾ ಸಾದ್ಯತೆಗಳಿವೆ. ಇನ್ನು ಶಂಕಿತ ಉಗ್ರರ ಬಳಿ ಸಿಕ್ಕಿರುವ ಗನ್ ಗಳನ್ನು ನೋಡಿದ್ರೆ, ಕಂಟ್ರಿ ಮೇಡ್ ಪಿಸ್ತೂಲ್ ತರಬೇತಿ ಪಡೆದಿದ್ರಾ ಎನ್ನುವ ಶಂಕೆಗಳು ವ್ಯಕ್ತವಾಗಿವೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror