ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |

February 16, 2025
4:46 PM
ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ  ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14  ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು  18 ಸೋಂಕಿತರಲ್ಲಿ 11 ಜನರು  ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ  ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror