ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |

February 16, 2025
4:46 PM
ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ  ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14  ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು  18 ಸೋಂಕಿತರಲ್ಲಿ 11 ಜನರು  ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ  ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror