ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14 ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು 18 ಸೋಂಕಿತರಲ್ಲಿ 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…