ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14 ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು 18 ಸೋಂಕಿತರಲ್ಲಿ 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…