ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14 ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು 18 ಸೋಂಕಿತರಲ್ಲಿ 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…