ಕಳೆದ ಒಂದು ತಿಂಗಳಿನಿಂದ ಸಂಪಾಜೆ, ಚೆಂಬು, ಮಡಿಕೇರಿ ಪ್ರದೇಶದಲ್ಲಿ ಭೂಕಂಪನದ ಸದ್ದಿನ ಬಳಿಕ ಇದೀಗ ಭೂಕುಸಿತದ ಸದ್ದು ಕೇಳುತ್ತಿದೆ. ಎರಡು ದಿನಗಳ ಹಿಂದೆ ರಾಮಕೊಲ್ಲಿಯಲ್ಲಿ ಭೂಕುಸಿತ ಸಂಭವಿಸಿದ ಬಳಿಕ ಮದೆನಾಡು ಬಳಿ ಬೆಟ್ಟ ಕುಸಿತಗೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಣ್ಣು ಮಿಶ್ರಿತ ನೀರು ಹೊಳೆಯಲ್ಲಿ ಹರಿದು ಬರುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗುರುವಾರ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಪ್ರದೇಶದಲ್ಲಿ ಬೆಟ್ಟದಿಂದ ಸದ್ದು ಕೇಳಿತ್ತು. ಶುಕ್ರವಾರ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಸದ್ಯ ಯಾವುದೇ ಮನೆಗಳು , ಕೃಷಿ ಭೂಮಿ ಇಲ್ಲ. ಅಪಾಯದ ಹಿನ್ನೆಲೆಯಲ್ಲಿ ಆಸುಪಾಸಿನ ಮನೆಯವರನ್ನು ಸ್ಥಳಾಂತರ ಈ ಹಿಂದೆಯೇ ಮಾಡಲಾಗಿತ್ತು. ಇದೀಗ ಬೆಟ್ಟ ಕುಸಿದಿರುವ ಬಗ್ಗೆ ದೂರದಿಂದ ಗೋಚರವಾಗುತ್ತದೆ ಎನ್ನುವುದು ಸ್ಥಳೀಯರ ಮಾಹಿತಿ. ಅಧಿಕಾರಿಗಳು, ಸ್ಥಳೀಯರು ಬೆಟ್ಟ ಕುಸಿತದ ಕಾರಣದಿಂದ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ.
ಈ ನಡುವೆ ಎರಡನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನರಿಗೆ ಆತಂಕ ಉಂಟಾಗಿತ್ತು. ಇದೀಗ ನಿಶಾನಿ ಬೆಟ್ಟದ ಪ್ರದೇಶಕ್ಕೆ ಹಾಗೂ ಮೊಣ್ಣಂಗೇರಿಯ ರಾಮಕೊಲ್ಲಿ ಪ್ರದೇಶಕ್ಕೆ ಅಧಿಕಾರಿಗಳು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…