ಕಳೆದ ಒಂದು ತಿಂಗಳಿನಿಂದ ಸಂಪಾಜೆ, ಚೆಂಬು, ಮಡಿಕೇರಿ ಪ್ರದೇಶದಲ್ಲಿ ಭೂಕಂಪನದ ಸದ್ದಿನ ಬಳಿಕ ಇದೀಗ ಭೂಕುಸಿತದ ಸದ್ದು ಕೇಳುತ್ತಿದೆ. ಎರಡು ದಿನಗಳ ಹಿಂದೆ ರಾಮಕೊಲ್ಲಿಯಲ್ಲಿ ಭೂಕುಸಿತ ಸಂಭವಿಸಿದ ಬಳಿಕ ಮದೆನಾಡು ಬಳಿ ಬೆಟ್ಟ ಕುಸಿತಗೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಣ್ಣು ಮಿಶ್ರಿತ ನೀರು ಹೊಳೆಯಲ್ಲಿ ಹರಿದು ಬರುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗುರುವಾರ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಪ್ರದೇಶದಲ್ಲಿ ಬೆಟ್ಟದಿಂದ ಸದ್ದು ಕೇಳಿತ್ತು. ಶುಕ್ರವಾರ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಸದ್ಯ ಯಾವುದೇ ಮನೆಗಳು , ಕೃಷಿ ಭೂಮಿ ಇಲ್ಲ. ಅಪಾಯದ ಹಿನ್ನೆಲೆಯಲ್ಲಿ ಆಸುಪಾಸಿನ ಮನೆಯವರನ್ನು ಸ್ಥಳಾಂತರ ಈ ಹಿಂದೆಯೇ ಮಾಡಲಾಗಿತ್ತು. ಇದೀಗ ಬೆಟ್ಟ ಕುಸಿದಿರುವ ಬಗ್ಗೆ ದೂರದಿಂದ ಗೋಚರವಾಗುತ್ತದೆ ಎನ್ನುವುದು ಸ್ಥಳೀಯರ ಮಾಹಿತಿ. ಅಧಿಕಾರಿಗಳು, ಸ್ಥಳೀಯರು ಬೆಟ್ಟ ಕುಸಿತದ ಕಾರಣದಿಂದ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ.
ಈ ನಡುವೆ ಎರಡನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನರಿಗೆ ಆತಂಕ ಉಂಟಾಗಿತ್ತು. ಇದೀಗ ನಿಶಾನಿ ಬೆಟ್ಟದ ಪ್ರದೇಶಕ್ಕೆ ಹಾಗೂ ಮೊಣ್ಣಂಗೇರಿಯ ರಾಮಕೊಲ್ಲಿ ಪ್ರದೇಶಕ್ಕೆ ಅಧಿಕಾರಿಗಳು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…