ಕಳೆದ ಒಂದು ತಿಂಗಳಿನಿಂದ ಸಂಪಾಜೆ, ಚೆಂಬು, ಮಡಿಕೇರಿ ಪ್ರದೇಶದಲ್ಲಿ ಭೂಕಂಪನದ ಸದ್ದಿನ ಬಳಿಕ ಇದೀಗ ಭೂಕುಸಿತದ ಸದ್ದು ಕೇಳುತ್ತಿದೆ. ಎರಡು ದಿನಗಳ ಹಿಂದೆ ರಾಮಕೊಲ್ಲಿಯಲ್ಲಿ ಭೂಕುಸಿತ ಸಂಭವಿಸಿದ ಬಳಿಕ ಮದೆನಾಡು ಬಳಿ ಬೆಟ್ಟ ಕುಸಿತಗೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಣ್ಣು ಮಿಶ್ರಿತ ನೀರು ಹೊಳೆಯಲ್ಲಿ ಹರಿದು ಬರುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗುರುವಾರ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಪ್ರದೇಶದಲ್ಲಿ ಬೆಟ್ಟದಿಂದ ಸದ್ದು ಕೇಳಿತ್ತು. ಶುಕ್ರವಾರ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಸದ್ಯ ಯಾವುದೇ ಮನೆಗಳು , ಕೃಷಿ ಭೂಮಿ ಇಲ್ಲ. ಅಪಾಯದ ಹಿನ್ನೆಲೆಯಲ್ಲಿ ಆಸುಪಾಸಿನ ಮನೆಯವರನ್ನು ಸ್ಥಳಾಂತರ ಈ ಹಿಂದೆಯೇ ಮಾಡಲಾಗಿತ್ತು. ಇದೀಗ ಬೆಟ್ಟ ಕುಸಿದಿರುವ ಬಗ್ಗೆ ದೂರದಿಂದ ಗೋಚರವಾಗುತ್ತದೆ ಎನ್ನುವುದು ಸ್ಥಳೀಯರ ಮಾಹಿತಿ. ಅಧಿಕಾರಿಗಳು, ಸ್ಥಳೀಯರು ಬೆಟ್ಟ ಕುಸಿತದ ಕಾರಣದಿಂದ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ.
ಈ ನಡುವೆ ಎರಡನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನರಿಗೆ ಆತಂಕ ಉಂಟಾಗಿತ್ತು. ಇದೀಗ ನಿಶಾನಿ ಬೆಟ್ಟದ ಪ್ರದೇಶಕ್ಕೆ ಹಾಗೂ ಮೊಣ್ಣಂಗೇರಿಯ ರಾಮಕೊಲ್ಲಿ ಪ್ರದೇಶಕ್ಕೆ ಅಧಿಕಾರಿಗಳು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…