ಕಳೆದ ಒಂದು ತಿಂಗಳಿನಿಂದ ಸಂಪಾಜೆ, ಚೆಂಬು, ಮಡಿಕೇರಿ ಪ್ರದೇಶದಲ್ಲಿ ಭೂಕಂಪನದ ಸದ್ದಿನ ಬಳಿಕ ಇದೀಗ ಭೂಕುಸಿತದ ಸದ್ದು ಕೇಳುತ್ತಿದೆ. ಎರಡು ದಿನಗಳ ಹಿಂದೆ ರಾಮಕೊಲ್ಲಿಯಲ್ಲಿ ಭೂಕುಸಿತ ಸಂಭವಿಸಿದ ಬಳಿಕ ಮದೆನಾಡು ಬಳಿ ಬೆಟ್ಟ ಕುಸಿತಗೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಣ್ಣು ಮಿಶ್ರಿತ ನೀರು ಹೊಳೆಯಲ್ಲಿ ಹರಿದು ಬರುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗುರುವಾರ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಪ್ರದೇಶದಲ್ಲಿ ಬೆಟ್ಟದಿಂದ ಸದ್ದು ಕೇಳಿತ್ತು. ಶುಕ್ರವಾರ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಸದ್ಯ ಯಾವುದೇ ಮನೆಗಳು , ಕೃಷಿ ಭೂಮಿ ಇಲ್ಲ. ಅಪಾಯದ ಹಿನ್ನೆಲೆಯಲ್ಲಿ ಆಸುಪಾಸಿನ ಮನೆಯವರನ್ನು ಸ್ಥಳಾಂತರ ಈ ಹಿಂದೆಯೇ ಮಾಡಲಾಗಿತ್ತು. ಇದೀಗ ಬೆಟ್ಟ ಕುಸಿದಿರುವ ಬಗ್ಗೆ ದೂರದಿಂದ ಗೋಚರವಾಗುತ್ತದೆ ಎನ್ನುವುದು ಸ್ಥಳೀಯರ ಮಾಹಿತಿ. ಅಧಿಕಾರಿಗಳು, ಸ್ಥಳೀಯರು ಬೆಟ್ಟ ಕುಸಿತದ ಕಾರಣದಿಂದ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ.
ಈ ನಡುವೆ ಎರಡನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಜನರಿಗೆ ಆತಂಕ ಉಂಟಾಗಿತ್ತು. ಇದೀಗ ನಿಶಾನಿ ಬೆಟ್ಟದ ಪ್ರದೇಶಕ್ಕೆ ಹಾಗೂ ಮೊಣ್ಣಂಗೇರಿಯ ರಾಮಕೊಲ್ಲಿ ಪ್ರದೇಶಕ್ಕೆ ಅಧಿಕಾರಿಗಳು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…