ಜಲಸ್ಫೋಟ | ಕೊಡಗಿನ ಎರಡನೇ ಮೊಣ್ಣಂಗೇರಿಯಲ್ಲಿ ಕೃಷಿ ನಾಶ | 25 ಕುಟುಂಬಗಳಿಗೆ ಆತಂಕ |

July 19, 2022
10:10 PM

ಭಾರೀ ಮಳೆಯ ಆತಂಕದ ನಡುವೆ ಕೊಡಗಿನ ಮೊಣ್ಣಂಗೇರಿ ಪ್ರದೇಶದಲ್ಲಿನ ರಾಮಕೊಲ್ಲಿಯ ಸುಮಾರು 25 ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಸೋಮವಾರ ರಾತ್ರಿ ಭಾರೀ ಸದ್ದಿನೊಂದಿಗೆ ಗುಡ್ಡ ಕುಸಿದು ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಬೆಟ್ಟದ ಕೆಳಗಿನ ಪ್ರದೇಶದಲ್ಲಿನ ಕೃಷಿ ಭೂಮಿಗಳು ನಾಶವಾಗಿದೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಭಾರೀ ಶಬ್ಧದ ಅನುಭವವಾಗಿದ್ದು, ಅಲ್ಲಿ ಹರಿಯುವ ರಾಮಕೊಲ್ಲಿಯಲ್ಲಿ ಭಾರೀ ಪ್ರಮಾಣದ ಕೆಸರು ನೀರು ಹಾಗೂ ಮರದ ದಿಮ್ಮಿಗಳು ಬೆಟ್ಟದಿಂದ ಹರಿದು ಬರುತ್ತಿರುವುದು ಮಂಗಳವಾರ ಮುಂಜಾನೆ ಕಂಡು ಬಂದಿದೆ.2018 ರಲ್ಲಿ ಭೀಕರ ಜಲಸ್ಫೋಟವು ಇದೇ ಪ್ರದೇಶದಲ್ಲಿ ನಡೆದಿತ್ತು. ಹೀಗಾಗಿ ಮತ್ತೆ ಜಲಸ್ಫೋಟ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಜಲಸ್ಫೋಟದ ಕಾರಣದಿಂದ ಭೂ ಕುಸಿತವಾಗಿದೆ. ಮಣ್ಣು, ಕಲ್ಲುಗಳು ಉರುಳಿ, ಮರದ ದಿಮ್ಮಿಗಳು ಕಿಲೋ ಮೀಟರ್‌ಗಟ್ಟಲೆ ತೇಲಿ ಹೋಗಿದೆ. ರಾಮ ಕೊಲ್ಲಿ ಎಂಬಲ್ಲಿ ನಿರ್ಮಾಣ ಹಂತದ ಸೇತುವೆಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ರಾತ್ರಿಯಿಡೀ ಸಂಪರ್ಕ ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು 25 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ತೆರಳಲಾಗದೆ ಆತಂಕದಲ್ಲೇ ಸಮಯ ಕಳೆದಿದ್ದಾರೆ. ಮಂಗಳವಾರ ಬೆಳಗ್ಗೆ ಸೇತುವೆಯ ಬಳಿ ವಿದ್ಯುತ್‌ ಕಂಬಗಳನ್ನಿಟ್ಟು ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.

15 ದಿನಗಳಿಂದ ಮಣ್ಣು ಮಿಶ್ರಿತ ನೀರು ಇಲ್ಲಿ ಹರಿಯುತ್ತಿದ್ದು, ಸೋಮವಾರ ರಾತ್ರಿ ಭಾರಿ ಶಬ್ದ ಕೇಳಿಸಿದ ತಕ್ಷಣ ಮಳೆ ಸುರಿದಿದೆ. ನಂತರ ಜಲ ಸ್ಫೋಟವಾಗಿದ್ದು. ರಾತ್ರಿ 10 ರ ವೇಳೆಗೆ ಬೃಹತ್‌ ಪ್ರಮಾಣದ ಮಣ್ಣು, ಮರದ ದಿಮ್ಮಿ ಕೊಚ್ಚಿ ಬಂದು ಸೇತುವೆ ಮುಚ್ಚಿ ಹೋಗಿದೆ.

ಸ್ಥಳಕ್ಕೆ ಶಾಸಕ ಕೆ. ಜಿ. ಬೋಪಯ್ಯ ಮತ್ತು ಶಾಸಕ ಎಂ. ಪಿ. ಅಪ್ಪಚ್ಚು ರಂಜನ್‌ ಭೇಟಿ ನೀಡಿ ವೀಕ್ಷಿಸಿದರು.
…………
ರಾಮಕೊಲ್ಲಿಯ ಪ್ರದೇಶದಲ್ಲಿ ಸುಮಾರು  25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು ಬಿಟ್ಟಿದೆ. ಹೀಗಾಗಿ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror