ಭಾರೀ ಮಳೆಯ ಆತಂಕದ ನಡುವೆ ಕೊಡಗಿನ ಮೊಣ್ಣಂಗೇರಿ ಪ್ರದೇಶದಲ್ಲಿನ ರಾಮಕೊಲ್ಲಿಯ ಸುಮಾರು 25 ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಸೋಮವಾರ ರಾತ್ರಿ ಭಾರೀ ಸದ್ದಿನೊಂದಿಗೆ ಗುಡ್ಡ ಕುಸಿದು ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಬೆಟ್ಟದ ಕೆಳಗಿನ ಪ್ರದೇಶದಲ್ಲಿನ ಕೃಷಿ ಭೂಮಿಗಳು ನಾಶವಾಗಿದೆ.
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಭಾರೀ ಶಬ್ಧದ ಅನುಭವವಾಗಿದ್ದು, ಅಲ್ಲಿ ಹರಿಯುವ ರಾಮಕೊಲ್ಲಿಯಲ್ಲಿ ಭಾರೀ ಪ್ರಮಾಣದ ಕೆಸರು ನೀರು ಹಾಗೂ ಮರದ ದಿಮ್ಮಿಗಳು ಬೆಟ್ಟದಿಂದ ಹರಿದು ಬರುತ್ತಿರುವುದು ಮಂಗಳವಾರ ಮುಂಜಾನೆ ಕಂಡು ಬಂದಿದೆ.2018 ರಲ್ಲಿ ಭೀಕರ ಜಲಸ್ಫೋಟವು ಇದೇ ಪ್ರದೇಶದಲ್ಲಿ ನಡೆದಿತ್ತು. ಹೀಗಾಗಿ ಮತ್ತೆ ಜಲಸ್ಫೋಟ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಜಲಸ್ಫೋಟದ ಕಾರಣದಿಂದ ಭೂ ಕುಸಿತವಾಗಿದೆ. ಮಣ್ಣು, ಕಲ್ಲುಗಳು ಉರುಳಿ, ಮರದ ದಿಮ್ಮಿಗಳು ಕಿಲೋ ಮೀಟರ್ಗಟ್ಟಲೆ ತೇಲಿ ಹೋಗಿದೆ. ರಾಮ ಕೊಲ್ಲಿ ಎಂಬಲ್ಲಿ ನಿರ್ಮಾಣ ಹಂತದ ಸೇತುವೆಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ರಾತ್ರಿಯಿಡೀ ಸಂಪರ್ಕ ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು 25 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ತೆರಳಲಾಗದೆ ಆತಂಕದಲ್ಲೇ ಸಮಯ ಕಳೆದಿದ್ದಾರೆ. ಮಂಗಳವಾರ ಬೆಳಗ್ಗೆ ಸೇತುವೆಯ ಬಳಿ ವಿದ್ಯುತ್ ಕಂಬಗಳನ್ನಿಟ್ಟು ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.
ಸ್ಥಳಕ್ಕೆ ಶಾಸಕ ಕೆ. ಜಿ. ಬೋಪಯ್ಯ ಮತ್ತು ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿ ವೀಕ್ಷಿಸಿದರು.
…………
ರಾಮಕೊಲ್ಲಿಯ ಪ್ರದೇಶದಲ್ಲಿ ಸುಮಾರು 25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು ಬಿಟ್ಟಿದೆ. ಹೀಗಾಗಿ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…