MIRROR FOCUS

ಜಲಸ್ಫೋಟ | ಕೊಡಗಿನ ಎರಡನೇ ಮೊಣ್ಣಂಗೇರಿಯಲ್ಲಿ ಕೃಷಿ ನಾಶ | 25 ಕುಟುಂಬಗಳಿಗೆ ಆತಂಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರೀ ಮಳೆಯ ಆತಂಕದ ನಡುವೆ ಕೊಡಗಿನ ಮೊಣ್ಣಂಗೇರಿ ಪ್ರದೇಶದಲ್ಲಿನ ರಾಮಕೊಲ್ಲಿಯ ಸುಮಾರು 25 ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಸೋಮವಾರ ರಾತ್ರಿ ಭಾರೀ ಸದ್ದಿನೊಂದಿಗೆ ಗುಡ್ಡ ಕುಸಿದು ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಬೆಟ್ಟದ ಕೆಳಗಿನ ಪ್ರದೇಶದಲ್ಲಿನ ಕೃಷಿ ಭೂಮಿಗಳು ನಾಶವಾಗಿದೆ.

Advertisement

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಭಾರೀ ಶಬ್ಧದ ಅನುಭವವಾಗಿದ್ದು, ಅಲ್ಲಿ ಹರಿಯುವ ರಾಮಕೊಲ್ಲಿಯಲ್ಲಿ ಭಾರೀ ಪ್ರಮಾಣದ ಕೆಸರು ನೀರು ಹಾಗೂ ಮರದ ದಿಮ್ಮಿಗಳು ಬೆಟ್ಟದಿಂದ ಹರಿದು ಬರುತ್ತಿರುವುದು ಮಂಗಳವಾರ ಮುಂಜಾನೆ ಕಂಡು ಬಂದಿದೆ.2018 ರಲ್ಲಿ ಭೀಕರ ಜಲಸ್ಫೋಟವು ಇದೇ ಪ್ರದೇಶದಲ್ಲಿ ನಡೆದಿತ್ತು. ಹೀಗಾಗಿ ಮತ್ತೆ ಜಲಸ್ಫೋಟ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಜಲಸ್ಫೋಟದ ಕಾರಣದಿಂದ ಭೂ ಕುಸಿತವಾಗಿದೆ. ಮಣ್ಣು, ಕಲ್ಲುಗಳು ಉರುಳಿ, ಮರದ ದಿಮ್ಮಿಗಳು ಕಿಲೋ ಮೀಟರ್‌ಗಟ್ಟಲೆ ತೇಲಿ ಹೋಗಿದೆ. ರಾಮ ಕೊಲ್ಲಿ ಎಂಬಲ್ಲಿ ನಿರ್ಮಾಣ ಹಂತದ ಸೇತುವೆಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ರಾತ್ರಿಯಿಡೀ ಸಂಪರ್ಕ ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು 25 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ತೆರಳಲಾಗದೆ ಆತಂಕದಲ್ಲೇ ಸಮಯ ಕಳೆದಿದ್ದಾರೆ. ಮಂಗಳವಾರ ಬೆಳಗ್ಗೆ ಸೇತುವೆಯ ಬಳಿ ವಿದ್ಯುತ್‌ ಕಂಬಗಳನ್ನಿಟ್ಟು ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.

15 ದಿನಗಳಿಂದ ಮಣ್ಣು ಮಿಶ್ರಿತ ನೀರು ಇಲ್ಲಿ ಹರಿಯುತ್ತಿದ್ದು, ಸೋಮವಾರ ರಾತ್ರಿ ಭಾರಿ ಶಬ್ದ ಕೇಳಿಸಿದ ತಕ್ಷಣ ಮಳೆ ಸುರಿದಿದೆ. ನಂತರ ಜಲ ಸ್ಫೋಟವಾಗಿದ್ದು. ರಾತ್ರಿ 10 ರ ವೇಳೆಗೆ ಬೃಹತ್‌ ಪ್ರಮಾಣದ ಮಣ್ಣು, ಮರದ ದಿಮ್ಮಿ ಕೊಚ್ಚಿ ಬಂದು ಸೇತುವೆ ಮುಚ್ಚಿ ಹೋಗಿದೆ.
Advertisement

ಸ್ಥಳಕ್ಕೆ ಶಾಸಕ ಕೆ. ಜಿ. ಬೋಪಯ್ಯ ಮತ್ತು ಶಾಸಕ ಎಂ. ಪಿ. ಅಪ್ಪಚ್ಚು ರಂಜನ್‌ ಭೇಟಿ ನೀಡಿ ವೀಕ್ಷಿಸಿದರು.
…………
ರಾಮಕೊಲ್ಲಿಯ ಪ್ರದೇಶದಲ್ಲಿ ಸುಮಾರು  25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು ಬಿಟ್ಟಿದೆ. ಹೀಗಾಗಿ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

2 hours ago

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…

2 hours ago

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…

2 hours ago

ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಆಷಾಢ ಮಾಸದಲ್ಲಿ

ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago