Advertisement
MIRROR FOCUS

ಜಲಸ್ಫೋಟ | ಕೊಡಗಿನ ಎರಡನೇ ಮೊಣ್ಣಂಗೇರಿಯಲ್ಲಿ ಕೃಷಿ ನಾಶ | 25 ಕುಟುಂಬಗಳಿಗೆ ಆತಂಕ |

Share

ಭಾರೀ ಮಳೆಯ ಆತಂಕದ ನಡುವೆ ಕೊಡಗಿನ ಮೊಣ್ಣಂಗೇರಿ ಪ್ರದೇಶದಲ್ಲಿನ ರಾಮಕೊಲ್ಲಿಯ ಸುಮಾರು 25 ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಸೋಮವಾರ ರಾತ್ರಿ ಭಾರೀ ಸದ್ದಿನೊಂದಿಗೆ ಗುಡ್ಡ ಕುಸಿದು ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಬೆಟ್ಟದ ಕೆಳಗಿನ ಪ್ರದೇಶದಲ್ಲಿನ ಕೃಷಿ ಭೂಮಿಗಳು ನಾಶವಾಗಿದೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಭಾರೀ ಶಬ್ಧದ ಅನುಭವವಾಗಿದ್ದು, ಅಲ್ಲಿ ಹರಿಯುವ ರಾಮಕೊಲ್ಲಿಯಲ್ಲಿ ಭಾರೀ ಪ್ರಮಾಣದ ಕೆಸರು ನೀರು ಹಾಗೂ ಮರದ ದಿಮ್ಮಿಗಳು ಬೆಟ್ಟದಿಂದ ಹರಿದು ಬರುತ್ತಿರುವುದು ಮಂಗಳವಾರ ಮುಂಜಾನೆ ಕಂಡು ಬಂದಿದೆ.2018 ರಲ್ಲಿ ಭೀಕರ ಜಲಸ್ಫೋಟವು ಇದೇ ಪ್ರದೇಶದಲ್ಲಿ ನಡೆದಿತ್ತು. ಹೀಗಾಗಿ ಮತ್ತೆ ಜಲಸ್ಫೋಟ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಜಲಸ್ಫೋಟದ ಕಾರಣದಿಂದ ಭೂ ಕುಸಿತವಾಗಿದೆ. ಮಣ್ಣು, ಕಲ್ಲುಗಳು ಉರುಳಿ, ಮರದ ದಿಮ್ಮಿಗಳು ಕಿಲೋ ಮೀಟರ್‌ಗಟ್ಟಲೆ ತೇಲಿ ಹೋಗಿದೆ. ರಾಮ ಕೊಲ್ಲಿ ಎಂಬಲ್ಲಿ ನಿರ್ಮಾಣ ಹಂತದ ಸೇತುವೆಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ರಾತ್ರಿಯಿಡೀ ಸಂಪರ್ಕ ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು 25 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ತೆರಳಲಾಗದೆ ಆತಂಕದಲ್ಲೇ ಸಮಯ ಕಳೆದಿದ್ದಾರೆ. ಮಂಗಳವಾರ ಬೆಳಗ್ಗೆ ಸೇತುವೆಯ ಬಳಿ ವಿದ್ಯುತ್‌ ಕಂಬಗಳನ್ನಿಟ್ಟು ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.

15 ದಿನಗಳಿಂದ ಮಣ್ಣು ಮಿಶ್ರಿತ ನೀರು ಇಲ್ಲಿ ಹರಿಯುತ್ತಿದ್ದು, ಸೋಮವಾರ ರಾತ್ರಿ ಭಾರಿ ಶಬ್ದ ಕೇಳಿಸಿದ ತಕ್ಷಣ ಮಳೆ ಸುರಿದಿದೆ. ನಂತರ ಜಲ ಸ್ಫೋಟವಾಗಿದ್ದು. ರಾತ್ರಿ 10 ರ ವೇಳೆಗೆ ಬೃಹತ್‌ ಪ್ರಮಾಣದ ಮಣ್ಣು, ಮರದ ದಿಮ್ಮಿ ಕೊಚ್ಚಿ ಬಂದು ಸೇತುವೆ ಮುಚ್ಚಿ ಹೋಗಿದೆ.

ಸ್ಥಳಕ್ಕೆ ಶಾಸಕ ಕೆ. ಜಿ. ಬೋಪಯ್ಯ ಮತ್ತು ಶಾಸಕ ಎಂ. ಪಿ. ಅಪ್ಪಚ್ಚು ರಂಜನ್‌ ಭೇಟಿ ನೀಡಿ ವೀಕ್ಷಿಸಿದರು.
…………
ರಾಮಕೊಲ್ಲಿಯ ಪ್ರದೇಶದಲ್ಲಿ ಸುಮಾರು  25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು ಬಿಟ್ಟಿದೆ. ಹೀಗಾಗಿ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

6 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

14 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

14 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

16 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

23 hours ago